ಸೆಪ್ಟೆಂಬರ್ 5ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತ ರುದ್ರಾಭಿಷೇಕ

August 20, 2026
shata rudrabhisheka bettampady

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ 5ರಂದು ಶತ ರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಮಾರ್ಗದರ್ಶನದಲ್ಲಿ, ವೇದಮೂರ್ತಿ ಶ್ರೀ ವೆಂಕಟರಮಣ ಭಟ್ ಮಂಜುಳಗಿರಿ ಹಾಗೂ ವೇದಮೂರ್ತಿ ಶ್ರೀ ವೆಂಕಟರಮಣ ಭಟ್ ಕಾನುಮೂಲೆ (ಪ್ರಧಾನ ಅರ್ಚಕರು ಶ್ರೀ ಕ್ಷೇತ್ರ ಬೆಟ್ಟಂಪಾಡಿ) ಇವರ ನೇತೃತ್ವದಲ್ಲಿ ಶತ ರುದ್ರಾಭಿಷೇಕ ನಡೆಯಲಿದೆ.

2026ರ ಸೆಪ್ಟೆಂಬರ್ 5ರಂದು ಶನಿವಾರ ಪೂರ್ವಾಹ್ನ 9 ಗಂಟೆಯಿಂದ ಶತ ರುದ್ರಾಭಿಷೇಕ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಭಗವದ್ಭಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.

ಇನ್ನಷ್ಟು ಓದಿ

bettampady ganeshotsava 2026

41ನೇ ವರ್ಷದ ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ

ವಿವರವಾಗಿ ಓದಿ

pattanaje jatre 2026

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆ

ವಿವರವಾಗಿ ಓದಿ